Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80475

ಕಾವೇರಿ ಅಧ್ಯಯನಕ್ಕೆ ಕರ್ನಾಟಕಕ್ಕೆ ಬರಲಿದೆ ಕೇಂದ್ರ ತಂಡ

$
0
0

ನವದೆಹಲಿ: ಆರಂಭದಿಂದ ಕಳೆದ ವಿಚಾರಣೆಯವರೆಗೂ ಪ್ರತಿ ಬಾರಿ ಹಿನ್ನಡೆ ಅನುಭವಿಸುತ್ತಿದ್ದ ಕರ್ನಾಟಕಕ್ಕೆ ದಸರೆಗೆ ಗಿಫ್ಟ್ ಎನ್ನುವಂತೆ ಸುಪ್ರೀಂ ಕೋರ್ಟ್ ಕೇಂದ್ರ ರಚಿಸಿದ್ದ ತಾಂತ್ರಿಕ ಉನ್ನತಾಧಿಕಾರ ತಂಡಕ್ಕೆ ಅಸ್ತು ಎಂದಿದೆ.

ಕೇಂದ್ರ ಜಲ ಆಯೋಗದ ಮುಖ್ಯಸ್ಥ ಜಿ.ಎಸ್ ಝಾ ಈ ತಂಡದ ಮುಖ್ಯಸ್ಥರಾಗಿದ್ದು, ಜಲ ಆಯೋಗದ ಮುಖ್ಯ ಎಂಜಿನಿಯರ್ ಮಸೂದ್ ಹುಸೇನ್, ಆರ್.ಕೆ. ಗುಪ್ತಾ ಅವರು ಅಕ್ಟೋಬರ್ 7ರಿಂದ ಎರಡೂ ರಾಜ್ಯದ ಕಾವೇರಿ ಕೊಳ್ಳಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಲಿದೆ.

ಅಟಾರ್ನಿ ಜನರಲ್ ಸೋಮವಾರ ಸಲ್ಲಿಸಿದ್ದ ಅಫಿಡವಿಟ್‍ನಲ್ಲಿ ತಾಂತ್ರಿಕ ಉನ್ನತಾಧಿಕಾರ ತಂಡದ ಬಗ್ಗೆ ಪ್ರಸ್ತಾಪಿಸಿ 10 ದಿನಗಳ ಕಾಲ ಅಧ್ಯಯನ ನಡೆಸಲು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದರು. ಈ ಪ್ರಸ್ತಾಪನ್ನು ವಿರೋಧಿಸಿದ ತಮಿಳುನಾಡು ವಕೀಲ ಶೇಖರ ನಾಫಡೆ, ರಾಜಕೀಯ ಕಾರಣಗಳಿಗಾಗಿ ಅರ್ಜಿ ಮಾರ್ಪಾಡು ಮಾಡಿ ಎಂದು ಕೇಂದ್ರ ವಾದಿಸುತ್ತಿದೆ. ತರಾತುರಿಯಲ್ಲಿ ಈ ಅರ್ಜಿ ವಿಚಾರಣೆ ನಡೆಸುವುದು ಬೇಡ ಎಂದು ವಾದಿಸಿದ್ದರು. ಆದರೆ ಇಂದು ಈ ಸುಪ್ರೀಂ ಕೋರ್ಟ್ ಕೇಂದ್ರ ನಿರ್ಧಾರಕ್ಕೆ ಗ್ರೀನ್ ಸಿಗ್ನಲ್ ನೀಡುವ ಮೂಲಕ ತಮಿಳುನಾಡಿಗೆ ಹಿನ್ನಡೆಯಾಗಿದೆ.

ತಾಂತ್ರಿಕ ಉನ್ನತಾಧಿಕಾರ ತಂಡದಲ್ಲಿ ಕರ್ನಾಟಕ, ತಮಿಳುನಾಡು, ಕೇರಳ, ಪುದುಚೇರಿ ರಾಜ್ಯಗಳ ಮುಖ್ಯ ಎಂಜಿನಿಯರ್ ಇರುತ್ತಾರೆ. ಈ ತಂಡ ಕರ್ನಾಟಕ ಮತ್ತು ತಮಿಳುನಾಡಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ಕೋರ್ಟ್‍ಗೆ ವರದಿ ನೀಡಲಿದೆ.


Viewing all articles
Browse latest Browse all 80475

Trending Articles


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ


ಮದುವೆಯಾಗಲು ನಿರ್ಧರಿಸಿದ್ದಾರೆ ಅಮ್ಮ- ಮಗ


LGBT ಗಳ ಲೈಂಗಿಕ ಆಸಕ್ತಿಯು ನೈಸರ್ಗಿಕವಾಗಿ ಬಂದಿರುವುದಲ್ಲವೇ….!


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲು ಮಂಗಳಮುಖಿಯಿಂದ ಒಂದು ನಾಣ್ಯ ಪಡೆದು ಹೀಗೆ ಮಾಡಿ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>